Image

ನವೆಂಬರ್ 15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್!

ನವದೆಹಲಿ: ಕೇಂದ್ರ ಸರ್ಕಾರ ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಗುಡ್ ನ್ಯೂಸ್ ನೀಡಿದ್ದು, ನವೆಂಬರ್ 15 ರಿಂದ, ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳ ಮಾಲೀಕರು ದುಪ್ಪಟ್ಟು ಹಣ ಪಾವತಿಸಬೇಕಾಗಿಲ್ಲ.

ಕೇಂದ್ರ ಸರ್ಕಾರ ಫಾಸ್ಟ್‌ಟ್ಯಾಗ್ ಇಲ್ಲದವರು ದುಪ್ಪಟ್ಟು ಹಣ ಪಾವತಿಸಬೇಕು ಎಂಬ ನಿಯಮವನ್ನು ಸಡಿಲಿಸಿದ್ದು, ನಗದು ರೂಪದಲ್ಲಿ ಪಾವತಿ ಆಯ್ಕೆ ಮಾಡಿಕೊಂಡರೆ ಟೋಲ್ ಶುಲ್ಕವನ್ನು ದುಪ್ಪಟ್ಟು ಪಾವತಿಸಬೇಕಾಗುತ್ತದೆ. ಆದರೆ UPI ಮೂಲಕ ಪಾವತಿ ಮಾಡಿದರೆ ಶುಲ್ಕದ 1.25 ಪಟ್ಟು ಟೋಲ್ ಪಾವತಿಸಬೇಕಾಗುತ್ತದೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ(MoRTH) ರಾಷ್ಟ್ರೀಯ ಹೆದ್ದಾರಿ ಶುಲ್ಕ(ದರಗಳು ಮತ್ತು ಸಂಗ್ರಹದ ನಿರ್ಣಯ) ನಿಯಮಗಳು, 2008 ಅನ್ನು ತಿದ್ದುಪಡಿ ಮಾಡಿದ್ದು, FASTag ಇಲ್ಲದ ಬಳಕೆದಾರರಿಗೆ ಅವರ ಪಾವತಿ ವಿಧಾನವನ್ನು ಆಧರಿಸಿ ವಿಭಿನ್ನ ಶುಲ್ಕ ಪರಿಚಯಿಸಿದೆ. ಈ ಕ್ರಮವು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮತ್ತು ಟೋಲ್ ಪ್ಲಾಜಾಗಳಲ್ಲಿ ನಗದು ಬಳಕೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ.

ಹೊಸ ನಿಯಮದ ಪ್ರಕಾರ, ಫಾಸ್ಟ್‌ಟ್ಯಾಗ್ ಇಲ್ಲದ ಅಥವಾ ದೋಷಯುಕ್ತ ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳು ಈಗ UPI ಬಳಸಿ ಪಾವತಿಸಿದರೆ ಟೋಲ್ ಪ್ಲಾಜಾಗಳಲ್ಲಿ ದುಪ್ಪಟ್ಟು ಬದಲು 1.25 ಪಟ್ಟು ಟೋಲ್ ಪಾವತಿಸಬೇಕಾಗುತ್ತದೆ. ಉದಾಹರಣೆಗೆ, ವಾಹನದ ಟೋಲ್ 100 ರೂ. ಆಗಿದ್ದರೆ, ಮೊದಲು ಫಾಸ್ಟ್‌ಟ್ಯಾಗ್ ಇಲ್ಲದವರು 200 ರೂ. ಪಾವತಿಸಬೇಕಿತ್ತು. ಆದರೆ ಈಗ ನೀವು UPI ಬಳಸಿ ಪಾವತಿಸಿದರೆ, 125 ರೂ. ಮಾತ್ರ ಪಾವತಿಸಬೇಕಾಗುತ್ತದೆ.

Releated Posts

ಸಹೃದಯಿ ಸಮಾಜಸೇವಕ ಬಿ.ಎ. ಮೊಯ್ದಿನ್ ಬಾವಾ ವಿಧಾನಸಭೆ ಪ್ರವೇಶಿಸಬೇಕೆಂಬ ಜನಮನದ ಆಶಯ

ಬಿ.ಎ.ಮೊಯ್ದಿನ್ ಬಾವಾ ಎಂಬ ಸಹೃದಯಿ ನಾಯಕ ಈಗ ಇಡೀ ರಾಜ್ಯಾದ್ಯಂತ ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದಾರೆ. ಇದಕ್ಕೆ ಕಾರಣ ಅವರ ಸಹೃದಯಿ ಮನಸ್ಸು…

ByByshanmedianewsDec 23, 2025

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ

ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆ : ಘಟಾನುಘಟಿ ನಾಯಕರುಗಳ ಭವಿಷ್ಯ ಡಿಸೇಂಬರ್ 24 ಕ್ಕೆ ನಿರ್ಧಾರ ಇತ್ತೀಚೆಗೆ ಮೇಲ್ದರ್ಜೆ ಗೆರಲ್ಪಟ್ಟ ಬಜ್ಪೆ ಪಟ್ಟಣ ಪಂಚಾಯತ್,…

ByByshanmedianewsDec 22, 2025

ಸಮಾಜಸೇವೆಯ ಸಾರ್ಥಕ ಪ್ರತೀಕ ಡಾ. ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್ – ಶಿಕ್ಷಣ, ವೈದ್ಯಕೀಯ ಹಾಗೂ ಮಾನವೀಯ ಸೇವೆಯಲ್ಲಿ ಅಪೂರ್ವ ಕೊಡುಗೆ

ಡಾ! ಅಲ್ ಹಾಜ್ ಯು.ಟಿ ಇಫ್ತಿಕಾರ್ ಅಲಿ ಫರೀದ್. ಈ ಹೆಸರನ್ನು ಕೇಳದವರು ಯಾರೂ ಇಲ್ಲ. ಕರ್ನಾಟಕ ರಾಜ್ಯದ ಅತ್ಯಂತ ಪ್ರಭಾವಿ ಶಾಸಕರಾಗಿದ್ದ ದಿವಂಗತ…

ByByshanmedianewsDec 22, 2025

ಉಮೀದ್ ಪೋರ್ಟಲ್ ಸಮಸ್ಯೆ: ವಕ್ಫ್ ಆಸ್ತಿ ಅಪ್ಲೋಡ್ ಗಡುವು ವಿಸ್ತರಣೆಗಾಗಿ AIMPLB ನಿಯೋಗದಿಂದ ಕೇಂದ್ರ ಸಚಿವರಿಗೆ ಮನವಿ

ಅಖಿಲ ಭಾರತ ಮುಸ್ಲಿಮ್ ಪರ್ಸನಲ್ ಲಾ ಬೋರ್ಡ್‌ನ (AIMPLB) ಉನ್ನತ ಮಟ್ಟದ ನಿಯೋಗವು ಕೇಂದ್ರ ಅಲ್ಪಸಂಖ್ಯಾತ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ, ವಕ್ಫ್…

ByByshanmedianewsDec 12, 2025

Scroll to Top