ಧರ್ಮಸ್ಥಳ ಕೇಸ್;‌ ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್‌ ಕಾರ್ಡ್‌ ರಹಸ್ಯ ಬಯಲು – ವಾರಸುದಾರ ಮಹಿಳೆ ಇನ್ನೂ ಜೀವಂತ

Written by Shan Farhan

August 1, 2025

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪಾಯಿಂಟ್‌ ನಂಬರ್‌ ಒಂದರಲ್ಲಿ ಸಿಕ್ಕ ಡೆಬಿಟ್‌ ಕಾರ್ಡ್‌, ಪಾನ್‌ ಕಾರ್ಡ್‌ ರಹಸ್ಯ ಬಯಲಾಗಿದೆ. ಡೆಬಿಟ್ ಕಾರ್ಡ್ ವಾರಿಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ.

ಪಾಯಿಂಟ್ ನಂಬರ್ ಒನ್‌ನಲ್ಲಿ ಡೆಬಿಟ್ ಹಾಗೂ ಪಾನ್ ಕಾರ್ಡ್ ಪತ್ತೆಯಾಗಿತ್ತು. ಅನಾರೋಗ್ಯದಿಂದ ಪಾನ್ ಕಾರ್ಡ್ ವಾರಿಸುದಾರ ಸಾವು ಎಂದು ಮಾಹಿತಿ ಸಿಕ್ಕಿತ್ತು. ಇದೀಗ, ಆ ಡೆಬಿಟ್ ಕಾರ್ಡ್ ಸಾವಿಗೀಡಾದ ವ್ಯಕ್ತಿಯ ತಾಯಿಗೆ ಸೇರಿದ್ದು ಎಂದು ಮಾಹಿತಿ ಲಭಿಸಿದೆ.
ಡೆಬಿಟ್‌ ಕಾರ್ಡ್‌ ವಾರಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಮಹಿಳೆಯನ್ನು ಸಂಪರ್ಕಿಸಿದ್ದಾರೆ. ಮಹಿಳೆ ಇನ್ನೂ ಜೀವಂತ ಎಂದು ಮಾಹಿತಿ ಸಿಕ್ಕಿದೆ. ಡೆಬಿಟ್ ಕಾರ್ಡ್ ಬಳಕೆದಾರರ ಮಾಹಿತಿಯನ್ನು ಎಸ್‌ಐಟಿ ಖಚಿತಪಡಿಸಿದೆ.

ಇದೇ ಡೆಬಿಟ್ ಕಾರ್ಡ್ ಹಾಗೂ ಪಾನ್ ಕಾರ್ಡ್ ಕುರಿತು ಅನೇಕ ಊಹಾಪೋಹ ಸೃಷ್ಟಿಯಾಗಿತ್ತು. ಸದ್ಯ ಎಲ್ಲ ಉಹಾಪೋಹಗಳಿಗೆ ತೆರೆ ಬಿದ್ದಿದೆ.

Shan Media News is a trusted digital news platform bringing you the latest updates from Karnataka and beyond. For feedback or story tips, contact us at [contact@shanmedianews.site].

Latest News

News

ಬೈಕಂಪಾಡಿ, ಕೈಗಾರಿಕಾ ಮೀನು ಸಂಸ್ಕರಣಾ ಘಟಕದಲ್ಲಿ ಅನಿಲ‌ ಸೋರಿಕೆ, ನಾಲ್ವರು ಕಾರ್ಮಿಕರು ಗಂಭೀರ : ಸಮಗ್ರ ತನಿಖೆಗೆ ಎಸ್.ಡಿ.ಟಿ.ಯು ಆಗ್ರಹ.

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ತೀವ್ರವಾಗಿ ಅಸ್ವಸ್ಥತಗೊಂಡು ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಘಾತಕಾರಿ
News

ಧರ್ಮಸ್ಥಳ ಕೇಸ್;‌ ಪಾಯಿಂಟ್‌ ನಂ.1ರಲ್ಲಿ ಸಿಕ್ಕ ಡೆಬಿಟ್‌, ಪಾನ್‌ ಕಾರ್ಡ್‌ ರಹಸ್ಯ ಬಯಲು – ವಾರಸುದಾರ ಮಹಿಳೆ ಇನ್ನೂ ಜೀವಂತ

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪಾಯಿಂಟ್‌ ನಂಬರ್‌ ಒಂದರಲ್ಲಿ ಸಿಕ್ಕ ಡೆಬಿಟ್‌ ಕಾರ್ಡ್‌, ಪಾನ್‌ ಕಾರ್ಡ್‌ ರಹಸ್ಯ ಬಯಲಾಗಿದೆ. ಡೆಬಿಟ್ ಕಾರ್ಡ್ ವಾರಿಸುದಾರ ಮಹಿಳೆ ಇನ್ನೂ ಜೀವಂತವಾಗಿದ್ದಾರೆ. ಪಾಯಿಂಟ್